ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.
ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…