ದಕ್ಷಿಣ ಭಾರತದ ಕ್ರಾಂತಿಕಾರಿ ದೇವಸ್ಥಾನ ಎಂದೇ ಪ್ರಸಿದ್ದಿ ಪಡೆದಿರುವ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನವದುರ್ಗೆಯರ ಪ್ರತಿಷ್ಠೆ ಹಾಗೂ ಗಣಪನನ್ನು ಪ್ರತಿಷ್ಠಾಪಿಸಿ ಗುರು ಪ್ರಾರ್ಥನೆಯೊಂದಿಗೆ ಮಂಗಳೂರು ದಸರಾಕ್ಕೆ ಚಾಲನೆ ಸಿಕ್ಕಿದೆ.
ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ದಸರಾಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ದೇವಸ್ಥಾನ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್, ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ರು. ಇನ್ನು ಬಿ.ಆರ್.ಕರ್ಕೇರ ಅವರು ಈ ದಸರಾಕ್ಕೆ ಮೊದಲು ಚಾಲನೆ ನೀಡಿದವರು. ಅಂದಿನಿ0ದ ಇಂದಿನವರೆಗೂ ಪ್ರತಿವರ್ಷ ಮಂಗಳೂರು ದಸರಾವನ್ನು ವಿಜೃಂಭಣೆಯಿAದ ಆಚರಿಸಲಾಗುತ್ತಿದೆ. ಆರಾಧನೆಯ ಜೊತೆಗೆ ದಸರಾದ ಪ್ರಮುಖ ಆಕರ್ಷಣೆಯಾಗಿ ಮಂಗಳೂರು ನಗರ ವಿದ್ಯುತ್ ದೀಪಾಲಂಕಾರಗಳಿAದ ಮದುವಣಗಿತ್ತಿಯಂತೆ ಸಿಂಗಾರಗೊAಡಿದೆ .ವರ್ಷದಿಂದ ವರ್ಷಕ್ಕೆ ಪ್ರಸಿದ್ಧಿ ಪಡೆಯುತ್ತಿರುವ ಮಂಗಳೂರು ದಸರಾಕ್ಕೆ ರಾಜ್ಯ, ದೇಶ ಮಾತ್ರವಲ್ಲದೆ ವಿದೇಶಗಳಿಂದಲೂ ಲಕ್ಷಾಂತರ ಜನರು ಆಗಮಿಸುತ್ತಾರೆ. ನವರಾತ್ರಿಯಲ್ಲಿ ಭಕ್ತರ ದಂಡೇ ಈ ಕ್ಷೇತ್ರಕ್ಕೆ ಹರಿದು ಬರುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಮಂಗಳೂರು ದಸರಾ ಕಣ್ತುಂಬಿಕೊಳ್ಳಲು ಜನರು ಕಾತುರರಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…