ಜನ ಮನದ ನಾಡಿ ಮಿಡಿತ

Advertisement

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಸಾವು..!

ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಇಂದು ನಡೆದಿದೆ.

 


ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸರ್ಪಾಝ್ ಅವರು ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಇಂಮ್ತಿಯಾಜ್ ಎಂಬಾತ ಇವರ ವಾಹನಕ್ಕೆಡಿಕ್ಕಿ ಹೊಡೆದಿದ್ದಾನೆ.ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರಿಣಿ ಅಣ್ಣ ತಂಗಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ‌ಗಾಯವಾಗಿತ್ತು.ಕೂಡಲೇ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಏಟಾಗಿದ್ದ ಸರ್ಪಾಝ್ ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೋಲೀಸ್ ‌ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!