ಜನ ಮನದ ನಾಡಿ ಮಿಡಿತ

Advertisement

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ

ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು.

 

ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದ್ದೆ. ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.

ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು. ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!