ಪ್ರಥಮಥ ಗುರುವಿಗೆ ವಂದಿಸುತ್ತ ನನ್ನ ನೆಚ್ಚಿನ ಶಿಕ್ಷಕರ ಬಗ್ಗೆ ಒಂದೆರಡು ಅನಿಸಿಕೆಗಳನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ.
“ಮನೆಯೇ ಮೊದಲ ಪಾಠಶಾಲೆ ಜನನಿ ತಾನೇ ಮೊದಲ ಗುರು” ಎಂಬ ನಾಣ್ನುಡಿಯಂತೆ ನನಗೆ ಮನೆಯೇ ಮೊದಲ ಪಾಠಶಾಲೆಯಾಗಿದೆ .ಅಂತೆಯೇ ನನ್ನ ನೆಚ್ಚಿನ ಶಿಕ್ಷಕ ನನ್ನ ತಂದೆಯೇ ಆಗಿದ್ದಾರೆ. ಸಣ್ಣ ವಯಸ್ಸಿನಿಂದಲೂ ತಂದೆಯ ಶಿಸ್ತು ,ಸಂಯಮ, ಸಮಯ ಪಾಲನೆ ಮುಂತಾದ ಗುಣಗಳು ನನ್ನ ಮೇಲೆ ಪ್ರಭಾವ ಬೀರಿದೆ. ಅವರು ಶಾಲೆಯಲ್ಲಿ ನನ್ನ ಶಿಕ್ಷಕರು ಕೂಡ ಹೌದು. ನನ್ನ ಶಾಲೆಯ ಹೆಸರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ,ನಾಗೂರು ನನ್ನ ತಂದೆ ಇಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನನ್ನಲ್ಲಿ ಸಣ್ಣ ವಯಸ್ಸಿನಿಂದಲೇ ಕನ್ನಡಾಭಿಮಾನವನ್ನು ಮೂಡಿಸಿದವರು ನನ್ನ ತಂದೆಯೇ ಆಗಿದ್ದಾರೆ. ನಾನು ಮೂರು ವರ್ಷದವಳಿರುವಾಗಲೇ ಕನ್ನಡವನ್ನು ಓದುವುದರ ಜೊತೆಗೆ ಸ್ಪಷ್ಟವಾಗಿ ಬರೆಯುತ್ತಿದ್ದೆ. ಎಲ್ಲರೂ ಇದಕ್ಕೆ ಅಚ್ಚರಿಪಡುತ್ತಿದ್ದರು. ಇದಕ್ಕೆ ಕಾರಣ ನಾನು ದಿನವೂ ನನ್ನ ತಂದೆ ಮನೆಯಲ್ಲಿ. ಪಾಠಕ್ಕೆ ಅಣಿ ಯಾಗುವುದನ್ನು ನೋಡುತ್ತಿದ್ದೆ. ನನ್ನ ತಂದೆ ಉತ್ತಮ ಕಲಾವಿದರು ಹೌದು. ಅವರಿಂದ ನಾನು ನಾಟಕ ಅಭಿನಯ, ಕಾವ್ಯವಾಚನ ಮುಂತಾದ ಕಲೆಗಳನ್ನು ಕೂಡ ಕಲಿತಿದ್ದೇನೆ . “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ದಾಸವಾಣಿಯಂತೆ ಗುರುವಿಗೆ, ಗುರುವಿನ ಸ್ಥಾನದಲ್ಲಿರುವರಿಗೆ ನಾವು ಗೌರವವನ್ನು ನೀಡಬೇಕು. ನನ್ನ ತಂದೆ ಇವೆಲ್ಲ ಗುಣಗಳನ್ನು ನನಗೆ ಕಲಿಸಿ ಕೊಟ್ಟಿದ್ದಾರೆ. ನನ್ನ ತಂದೆಯಾಗಿ, ಗುರು ಆಗಿ ನನಗೆ ಸರಿ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡಿದ್ದಾರೆ.
ಶ್ರೇಯಾ. ಆರ್ ನಾಯ್ಕ
10ನೇ ತರಗತಿ ಸಂದೀಪನ ಆಂಗ್ಲ ಮಾಧ್ಯಮ ಶಾಲೆ,ನಾಗೂರು
ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…