ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ ಅವರು ದೀಪ ಬೆಳಗಿ ಉದ್ಘಾಟಿಸಿದರು.

ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!