ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ ಅವರು ದೀಪ ಬೆಳಗಿ ಉದ್ಘಾಟಿಸಿದರು.
ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…