ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ ಅವರು ದೀಪ ಬೆಳಗಿ ಉದ್ಘಾಟಿಸಿದರು.
ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…