ಜನ ಮನದ ನಾಡಿ ಮಿಡಿತ

Advertisement

ಹೊಸಂಗಡಿ : ಕೋಕೋ ಗಿಡ ಸಂರಕ್ಷಣೆ ಮತ್ತು ಪರಿಕರ ವಿತರಣೆ

ದಕ್ಷಿಣ ಕನ್ನಡ :ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ, ಹೊಸಂಗಡಿ ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2024 – 25 ಇದರ ಅಂಗವಾಗಿ ಕೋ ಕೋ ಗಿಡ ಸವರುವಿಕೆ ತರಬೇತಿ ಕಾರ್ಯಕ್ರಮ ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿ ಮತ್ತು ಕೋ ಕೋ ಗಿಡದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಎಡ್ವರ್ಡ್ ವಿಲ್ಸನ್ ರೋಡ್ರಿಗಸ್,ಶಾಂತಿ ಕಾಡು ಇವರ ಕೋಕೋ ತೋಟದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತರಬೇತಿಯನ್ನು ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ಇದರ ತೋಟಗಾರಿಕಾ ವಿಜ್ಞಾನಿಯಾಗಿರುವ ಡಾ. ರಶ್ಮಿ ಮತ್ತು ಸಸ್ಯ ಸಂರಕ್ಷಣಾ ವಿಜ್ಞಾನಿಯಾಗಿರುವ ಡಾ.ಕೇ ದರನಾಥ ಇವರು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮೀಣಾಭಿವೃದ್ಧಿ ಸಮಿತಿ, ಹೊಸಂಗಡಿ ಇದರ ಅಧ್ಯಕ್ಷರು ಮತ್ತು ಕಾರ್ಯಕ್ರಮದ ಸಂಯೋಜಕರಾದ ಹರಿಪ್ರಸಾದ್. ಪಿ.ಇವರು ವಹಿಸಿದ್ದರು.
ತರಬೇತಿ ಕಾರ್ಯಕ್ರಮದಲ್ಲಿ ಸುಮಾರು 18 ಜನ ರೈತರು ಭಾಗವಹಿಸಿ, ಮೂರು ಜನ ರೈತರನ್ನು ಕೋ ಕೋ ಗಿಡ ಮುಂಚೂಣಿ ಪ್ರಾತ್ಯಕ್ಷಿಕೆ 2024 -25 ಸಾಲಿಗೆ ಆಯ್ಕೆ ಮಾಡಿ, ಕೋ ಕೋ ಸವರುವಿಕೆಗೆ ಬೇಕಾದ ಕೃಷಿ ಪರಿಕರಗಳನ್ನು ನೀಡಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!