ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.
ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…