ಮಂಗಳೂರು: ಇಂದು ಮುಂಜಾನೆಯಿಂದ ನಾಪತ್ತೆಯಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸೋದರ; ಉದ್ಯಮಿ ಮುಮ್ತಾಜ್ ಆಲಿಯವರಿಗಾಗಿ ಹುಡುಕಾಟ ಮುಂದುವರೆದಿದೆ. ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೂಳೂರು ಸೇತುವೆ ಬಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.
ಮಾಜಿ ಶಾಸಕ ಮೊಯ್ದಿನ್ ಬಾವಾ ಕೂಡ ಸ್ಥಳದಲ್ಲಿದ್ದು ಮುಳುಗುತಜ್ಞ ಈಶ್ವರ್ ಮಲ್ಪೆ ತಂಡ ಸಹಿತ ಹಲವು ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ನಿರತವಾಗಿವೆ. ಒಂದು ಹಂತದ ಹುಡುಕಾಟದ ನಡೆಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ನಾವು ಏಳು ಜನ ನದಿಯ ಆಳದಲ್ಲಿ ಮುಳುಗಿ ಕಾರ್ಯಾಚರಣೆ ನಡೆಸಿದ್ದೇವೆ, ಆದರೆ ಎಲ್ಲೂ ಕೂಡ ಅಲಿಯವರು ಪತ್ತೆಯಾಗಿಲ್ಲ ಎಂದರು.
ಸದ್ಯಕ್ಕೆ 100 ಮೀಟರ್ ಸುತ್ತುತ್ತಾ ಹುಡುಕಾಟ ನಡೆಸಲಾಗಿದೆ. ಸೇತುವೆ ಆಳಕ್ಕೆ ಇಳಿದು ಹುಡುಕಾಟ ನಡೆಸಿದ್ದೇವೆ. ಸೇತುವೆ ಕಾಮಗಾರಿ ನಡೆಯುತ್ತಿದ್ದು ಕೆಳಗೆ ಕಬ್ಬಿಣದ ಸರಳು, ಸಿಮೆಂಟ್ ಚೀಲಗಳಿವೆ. ನದಿಯ ಕೆಳಭಾಗದಲ್ಲಿ ಕತ್ತಲೆ ಇರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.
ಇಲ್ಲಿ ಬಿದ್ದಿದ್ದರೆ ಇಲ್ಲೇ ಸಿಗಬೇಕು, ಇಷ್ಟು ಬೇಗ ಸಮುದ್ರ ಸೇರುವುದಿಲ್ಲ. ಎಲ್ಲಾ ತಂಡಗಳು ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದೇವೆ. ಅವರು ಜೀವಂತವಾಗಿ ಇರಲಿ ಎಂದು ಆಶೀಸುತ್ತೇವೆ ಎಂದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಲಿ ಅವರ ಸಹೋದರ ಬಿ.ಎಂ ಫಾರೂಕ್, ಐವನ್ ಡಿಸೋಜ ಭೇಟಿ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…