ಕರಾವಳಿ

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024

  • ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024
  • ಜೂಯಿಸ್ ಫಿಟ್ನೆಸ್ ಕ್ಲಬ್ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆಯೋಜನೆ

ಮಂಗಳೂರು: ಬೆಳಗ್ಗೆ ಸುಮಾರು ಐದು ಗಂಟೆಯ ವೇಳೆ ಚುಮು ಚುಮು ಚಳಿಯ ಮಧ್ಯೆಯೂ ಕುದ್ರೋಳಿ ಕ್ಷೇತ್ರದ ಪರಿಸರದಲ್ಲಿ ಸೇರಿದ ಸಹಸ್ರಾರು ಮಂದಿಯಲ್ಲಿ ಬತ್ತದ ಉತ್ಸಾಹ.. ಗೆಲುವಿನ ಖುಷಿ…


ಇಂತಹ ಅದ್ಭುತ ಸನ್ನಿವೇಶಕ್ಕೆ ಕಾರಣವಾಗಿದ್ದು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ನಡೆದ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್-2024 ಸ್ಪರ್ಧೆ…
‘ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆ ದಕ್ಷಿಣಕನ್ನಡ ಜಿಲ್ಲೆಯನ್ನು ವ್ಯಸನಮುಕ್ತವಾಗಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಚಿಣ್ಣರಿಂದ ವೃದ್ಧರವರೆಗೂ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ಮೂಲಕ ವಿಶೇಷ ಮೆರಗು ನೀಡಿದರು. ಕೇರಳ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. ಧಾರ್ಮಿಕ ಕ್ಷೇತ್ರದಿಂದ ಇಂತಹ ಸಮಾಜಮುಖಿ ಧ್ಯೇಯದೊಂದಿಗೆ ಮ್ಯಾರಾಥಾನ್ ಆಯೋಜಿಸಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. 21 ಕಿ.ಮೀ, 10 ಕಿ.ಮೀ ಸ್ಪರ್ಧೆ ಮತ್ತು 5 ಕಿ.ಮೀಟರ್ ಫನ್ ರನ್ ನಡೆಯಿತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ. ಹಾಗೂ ತೃತೀಯ 10 ಸಾವಿರ ರೂ., 10 ಕಿ.ಮೀ. ಹಾಫ್ ಮ್ಯಾರಥಾನ್‌ಗೆ ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ. ಹಾಗೂ ತೃತೀಯ 5 ಸಾವಿರ ರೂ. ಬಹುಮಾನ ನೀಡಲಾಯಿತು.

ಉದ್ಘಾಟನೆ: ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿ ಸಂತೋಷ್ ಜೆ.ಪೂಜಾರಿ, ಕುದ್ರೋಳಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ದ.ಕ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ, ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಅನಿಲ್ ಲೋಬೋ, ಜೂಯಿಸ್ ಫಿಟ್ನೆಸ್ ಕ್ಲಬ್‌ನ ರಾಜೇಶ್ ಪಾಟಾಲಿ, ಕಬಡ್ಡಿಪಟು ರವಿ ಉರ್ವ, ಗೋಕರ್ಣನಾಥ ಸೇವಾದಳ ಸದಸ್ಯರು ಮೊದಲಾದವರು ಇದ್ದರು. ಆರ್.ಜೆ ಅನುರಾಗ್ ಕಾರ್ಯಕ್ರಮ ನಿರೂಪಿಸಿದರು.

ಬಹುಮಾನ ವಿಜೇತರು
10ಕೆ ಪುರುಷರ ವಿಭಾಗ
ಪ್ರಥಮ: ಮಂಗಳೂರಿನ ರಂಗಣ್ಣ ನಾಯ್ಕರ (33 ನಿಮಿಷ 53ಸೆಕೆಂಡ್),
ದ್ವಿತೀಯ: ಬೆಂಗಳೂರಿನ ಶ್ರೀಧರ ಎಸ್.ಎನ್(33.55)
ತೃತೀಯ: ಬೆಂಗಳೂರಿನ ಗೋವಿಂದರಾಜ ಎಚ್. (35.15)

10ಕೆ ಮಹಿಳಾ ವಿಭಾಗ
ಪ್ರಥಮ: ಬೆಂಗಳೂರಿನ ಸ್ಮಿತಾ ಡಿ.ಆರ್.(41.09)
ದ್ವಿತೀಯ: ಮೈಸೂರಿನ ಉಷಾ ಆರ್. (42.01)
ತೃತೀಯ: ಮೈಸೂರಿನ ಪ್ರೀಯಾಂಕಾ ಮಾರುತಿ(44.48)

22ಕೆ ಪುರುಷರ ವಿಭಾಗ
ಪ್ರಥಮ: ಬೆಳಗಾಂನ ಶಿವಾನಂದ ಚಿಗರಿ (1ಗಂಟೆ 12ನಿಮಿಷ 07 ಸೆಕೆಂಡ್)
ದ್ವಿತೀಯ: ಹಾವೇರಿಯ ಪುರುಷೋತ್ತಮ ಆರ್. (1.13.28),
ತೃತೀಯ: ಮೈಸೂರಿನ ಸಚಿನ್ ನಂದು (1.14.13)

22ಕೆ ಮಹಿಳಾ ವಿಭಾಗ
ಪ್ರಥಮ: ಕೇರಳದ ಆಶಾ ಟಿ.ಪಿ (1.30.20)
ದ್ವಿತೀಯ: ಬೆಂಗಳೂರಿನ ಪ್ರಿಯಾಂಕಾ ಸಿ (1.35.18)
ತೃತೀಯ: ಮೈಸೂರಿನ ಅರ್ಚನಾ ಕೆ. ಎಂ(1.36.14)

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

6 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

6 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

7 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

7 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

7 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

7 days ago