ಜನ ಮನದ ನಾಡಿ ಮಿಡಿತ

Advertisement

ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ; ದೇವಸ್ಥಾನದ ಅರ್ಚಕ ಬಂಧನ; 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದಾನೆ.

ಆರೋಪಿಯಿಂದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ ,73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ , 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ ಹೀಗೆ ಒಟ್ಟು 20,48,000 ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!