ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದಾನೆ.
ಆರೋಪಿಯಿಂದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ ,73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ , 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ ಹೀಗೆ ಒಟ್ಟು 20,48,000 ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…