ರಾಜ್ಯ

ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹಾಗೇ, ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

14 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

14 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

19 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

19 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

19 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

19 hours ago