ಇತರೆ

2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ರ‍್ಗಾ ಶರೀಫ್‌ಉರೂಸ್ ಸಮಾರಂಭ

ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ ಉರೂಸ್ ಸಮಾರಂಭ 2025  ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು.
ಅವರು ಕಡಬದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ಗಳನು ಆಯೋಜಿಸಲಾಗುತ್ತದೆ, ಹಾಗಾದಾಗ ಜಿಲ್ಲೆಯಲ್ಲೇ ದೊಡ್ಡ ಮಟ್ಟದಲ್ಲಿ ನಡೆಯುವ ಬೇಳ್ಪಾಡಿ ಉರೂಸ್‌ಗೆ ಬರುವವರಿಗೆ ತೊಂದರೆಯಾಗುತ್ತದೆ. ನಮ್ಮಲಿಯ ಕಾರ್ಯಕ್ರಮದ ದಿನಾಂಕ ಮೊದಲೇ ಘೋಷಿಸಿದರೆ ಇನ್ನುಳಿದ ಉರೂಸ್ ಸಮಾರಂಭ ನಡೆಸುವವರಿಗೆ ದಿನ ನಿಗದಿ ಮಾಡಲು ಅನುಕೂಲವಾಗುತ್ತದೆ ಎಂದರು.

ಬೇಳ್ಪಾಡಿಯಲ್ಲಿ ಒಟ್ಟು ೬ ದಿನಗಳ ಕಾರ್ಯಕ್ರಮಗಳು ನಡೆಯಲಿದ್ದು ಪ್ರತಿದಿನ ಪ್ರಭಾಷಣಗಳು, ಶಾದುಳಿರಾತೀಬುಗಳು, ಮಜ್ಲಿಸ್‌ನ್ನೂರ್‌ಗಳು, ಕವಾಲಿಗಳು, ದಪ್ಪುಗಳು, ಹಾಗೂ ಧಾರ್ಮಿಕ ಚೌಕಟ್ಟಿನೊಳಗೆ ಇರುವ ಇತರೇ ಕರ‍್ಯಕ್ರಮಗಳು ವಿಭಿನ್ನಶೈಲಿಯಲ್ಲಿ ನಡೆಯಲಿರುವುದು.
ಈ ಸಮಾರಂಭದಲ್ಲಿ ರಾಷ್ಟಿçಯ ಮತ್ತು ಅಂತರಾಷ್ಟಿçಯ ಮಟ್ಟದಲ್ಲಿ ತನ್ನ ವಾಕ್‌ಚಾತುರ್ಯದಲ್ಲಿ ಪ್ರಾವಿಣ್ಯತೆ ಪಡೆದ ಮತಪಂಡಿತರು, ,ಸೊಫಿವರ್ಯರು, ಸಾಧಾತುಗಳು, ಉಲಮಾ ಶಿರೋಮಣಿಗಳು ಭಾಗವಹಿಸಲಿರುವರು. ಕಾರ್ಯಕ್ರಮದ ಕೊನೆಯ ದಿನ ಅದ್ಧೂರಿ ಉರೂಸ್ ಸಮಾರಂಭ ನಡೆಯಲಿದ್ದು ಆಲಂಕಾರಿನಿoದ ಕುಂತೂರು ಬೇಳ್ಪಾಡಿ ತನಕ ಅರಬಿಕ್ ಸ್ಕೂಲ್ ವಿಧ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ-ದಪ್ಪುಗಳಿಂದ ಕೂಡಿದ ಹಾಡು ಇತ್ಯಾದಿ ಕರ‍್ಯಕ್ರಮ ವಿರುತ್ತದೆ. ಅಲ್ಲದೇ ರಾಜಕೀಯ ಸಾಮಾಜಿಕ ಧಾರ್ಮಿಕ ನೇತಾರರು ಭಾಗವಹಿಸಲಿದ್ದು , ೧೦ ಸಾವಿರಕ್ಕಿಂತಲೂ ಮಿಕ್ಕಿ ಬರುವ ಭಕ್ತಾದಿಗಳಿಗೆ ಅನ್ನದಾನ ನಡೆಯಲಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಅಬ್ಬಾಸ್ ಕೋರಿದರು.

ಸಾವಿರಾರು ಜನರ ರೋಗರುಜಿನಗಳಿಗೆ ಪರಿಹಾರವನ್ನು ಕಂಡುಕೊoಡ ಕುಂತೂರು-ಬೇಳ್ಪಾಡಿ ದರ್ಗಾಶರೀಫ್ ಮಸೀದಿಯಲ್ಲಿ ಸರ್ವಜನಾಂಗದವರು ಹರಕೆಹೊತ್ತು ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಇಲ್ಲಿನ ಬಹುಮುಖ್ಯ ಹರಕೆ ಎಂದರೆ- ಬೆಳ್ತಕ್ಕಿ ಮತ್ತು ಬೆಲ್ಲ, ಸಕ್ಕರೆ. ಹಾಗಾಗಿ ಇಲ್ಲಿ ಬೆಲ್ಲದ ಗಂಜಿಗೆ ಪ್ರಸಿದ್ದವಾಗಿದೆ ಪ್ರತಿದಿನ ಬರುವ ಭಕ್ತಾದಿಗಳಿಗೆ ಬೆಲ್ಲದ ಗಂಜಿ ಇರುತ್ತದೆ ಎಂದು ಅಬ್ಬಾಸ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಳ್ಪಾಡಿ ಮಸೀದಿಯ ಅಧ್ಯಕ್ಷ ಹಸೈನಾರ್ ಹಾಜಿ ಜಾಲ್ಕರೆ, ಉಪಾಧ್ಯಕ್ಷ ಅಯೂಬ್ ಯು.ಕೆ. ಪೂಂಜ, ಕಾರ್ಯದರ್ಶಿ ಯಾಕೂಬ್ ಕೋಚಕಟ್ಟೆ, ಕೋಶಾಧಿಕಾರಿ ಅಬ್ದುಲ್ಲಾ ಮುಡುಪಿನಡ್ಕ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago