ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಾರ್ಕಳ ವಿಧಾನ ಸಭಾ ಕ್ಷೇತ್ರ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಹಲವು ಪ್ರಮುಖರು ಬಾಯಿಗೆ ಬಟ್ಟೆ ಕಟ್ಟಿ ಪ್ರತಿಭಟಿಸಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಕಳ – ಬ್ಲಾಕ್ ಕಾಂಗ್ರೆಸ್ ಹೆಬ್ರಿಯ ಪ್ರಮುಖರು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಮೌನ ಧರಣಿ ಸತ್ಯಾಗ್ರಹವನ್ನು ನಿನ್ನೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆ ಸಾಯಂಕಾಲ 5 ಗಂಟೆಯ ವರೆಗೆ ನಡೆಸಿದರು. ವಿವಿಧ ಘೋಷಣೆಗಳುಳ್ಳ ಭಿತ್ತಿಚಿತ್ರಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು. ರಾಹುಲ್ ಗಾಂಧಿಯವರ ಸತ್ಯದ ನುಡಿಗಳನ್ನು ಸಹಿಸದ ಪ್ರಧಾನಿಯವರು ಅವರ ವಿರುದ್ಧ ಸೇಡಿನ ಕ್ರಮ ಅನುಸರಿಸುತ್ತಿದ್ದಾರೆ. ರಾಹುಲ್ ಗಾಂಧಿಯವರ ರಾಜಕೀಯ ಜೀವನ ಕೊನೆಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ವಕ್ತರ ಬಿಪಿನ್ ಚಂದ್ರ ಪಾಲ್ ನಕ್ರೆ, D.R. ರಾಜು ರಾಜ್ಯ ಹಿಂದುಳಿದ ವರ್ಗ ದ ಉಪಾಧ್ಯಕ್ಷರು, ಶೇಖರ್ ಮಡಿವಾಳ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶುಭದ ರಾವ್ ಕಾಂಗ್ರೆಸ್ ವಕ್ತರರು ಹಾಗೂ ಹಲವು ಪ್ರಮುಖರು ಬೆಂಬಲ ಸೂಚಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…