ದಕ್ಷಿಣ ಕನ್ನಡ :ಭತ್ತದ ಬೆಳೆಯಲ್ಲಿ ತೇನೆ ತಿಗಣೆ (ಬಂಬುಚಿ) ಕೀಟದ ನಿರ್ವಹಣೆ
ಭತ್ತವು ಪ್ರಮುಖ ಆಹಾರ ಬೆಳೆಯಾಗಿದ್ದು, ಸುಮಾರು 200 ಕ್ಕೂ ಹೆಚ್ಚು ಕೀಟಗಳ ಬಾಧೆಗೆ ಒಳಗಾಗುತ್ತದೆ. ಇವುಗಳಲ್ಲಿ 20 ಕೀಟಗಳು ಭತ್ತದ ಬೆಳೆಯ ವಿವಿಧ ಹಂತದಲ್ಲಿ ಕಂಡು ಬಂದು ಇಳುವರಿಯೂ ಕಡಿಮೆಮಾಡಿ ಆರ್ಥಿಕ ಹಾನಿಯುಂಟು ಮಾಡುತ್ತವೆ. ಪ್ರಮುಖವಾಗಿ ಭತ್ತದ ತೆನೆ ಬಿಡುವ ಸಮಯ ಮತ್ತು ಕಾಳು ತುಂಬುವ ಸಮಯದಲ್ಲಿ ತೆನೆ ತಿಗಣೆ (ಬಾಂಬೂಚಿ) ಕೀಟದ ಹಾವಳಿ ಕಂಡು ಬರುತ್ತದೆ.
ಈ ಕೀಟದ ಮರಿ ಹಾಗೂ ಪ್ರೌಢ ಕೀಟಗಳು ಭತ್ತದ ತೇನೆಗಳಲ್ಲಿನ ಬೀಜಗಳ ರಸವನ್ನು ಹೀರುವುದರಿಂದ ಕಾಳುಗಳು ಜೊಳ್ಳಾಗುವುದಲ್ಲದೆ, ರಸ ಹಿರಿರುವ ಕಾಳುಗಳ ಜಾಗದಲ್ಲಿ ಕಪ್ಪು ಚುಕ್ಕೆ ಕಾಣುತ್ತವೆ, ಇದರಿಂದ ಭತ್ತದ ಇಳುವರಿ ಕಡಿಯಾಗುವದಲ್ಲದೆ ಭತ್ತದ ಮಾರುಕಟ್ಟೆ ಬೆಲೆಯು ಕಡಿಮೆಯಾಗಿ ರೈತರು ಆರ್ಥಿಕ ನಷ್ಠ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಕೀಟದ ಸಮಗ್ರ ನಿರ್ವಹಣೆ ತುಂಬಾ ಅವಶ್ಯಕವೆಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ತಿಳಿಸಿದರು. ಈ ಕೀಟದ ಸಮಗ್ರ ನಿರ್ವಹಣೆಗಾಗಿ ರೈತರು ಭತ್ತದ ಗದ್ದೆಯಲ್ಲಿ ಮತ್ತು ಬದುಗಳಲ್ಲಿರುವ ಕಳೆಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡಬೇಕು. ಹಾಗೆಯೇ 5 ಮಿಲಿ ಅಝಾಡಿರಚ್ಟಿನ್ 0.03 % (ಕಹಿ ಬೇವಿನ ಎಣ್ಣೆ) ಅಥವಾ 2 ಮಿಲಿ ಫಿಪ್ರೊನಿಲ್ 5% ಎಸ್ ಸಿ ಅಥವಾ 0.6 ಮಿಲಿ ಇಮೀಡಾಕ್ಲೋಪ್ರಿಡ್ 06% + ಲಾಂಬ್ಧಾ ಸೈಹಲೋತ್ರೀನ್ 04 % ಎಸ್ ಎಲ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಅಥವಾ ಸಾಯಂಕಾಲದ ಸಮಯದಲ್ಲಿ ಸಿಂಪರಣೆ ಮಾಡಬೇಕು ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…