ದಕ್ಷಿಣ ಕನ್ನಡ :ಭತ್ತದ ಬೆಳೆಯಲ್ಲಿ ತೇನೆ ತಿಗಣೆ (ಬಂಬುಚಿ) ಕೀಟದ ನಿರ್ವಹಣೆ
ಭತ್ತವು ಪ್ರಮುಖ ಆಹಾರ ಬೆಳೆಯಾಗಿದ್ದು, ಸುಮಾರು 200 ಕ್ಕೂ ಹೆಚ್ಚು ಕೀಟಗಳ ಬಾಧೆಗೆ ಒಳಗಾಗುತ್ತದೆ. ಇವುಗಳಲ್ಲಿ 20 ಕೀಟಗಳು ಭತ್ತದ ಬೆಳೆಯ ವಿವಿಧ ಹಂತದಲ್ಲಿ ಕಂಡು ಬಂದು ಇಳುವರಿಯೂ ಕಡಿಮೆಮಾಡಿ ಆರ್ಥಿಕ ಹಾನಿಯುಂಟು ಮಾಡುತ್ತವೆ. ಪ್ರಮುಖವಾಗಿ ಭತ್ತದ ತೆನೆ ಬಿಡುವ ಸಮಯ ಮತ್ತು ಕಾಳು ತುಂಬುವ ಸಮಯದಲ್ಲಿ ತೆನೆ ತಿಗಣೆ (ಬಾಂಬೂಚಿ) ಕೀಟದ ಹಾವಳಿ ಕಂಡು ಬರುತ್ತದೆ.
ಈ ಕೀಟದ ಮರಿ ಹಾಗೂ ಪ್ರೌಢ ಕೀಟಗಳು ಭತ್ತದ ತೇನೆಗಳಲ್ಲಿನ ಬೀಜಗಳ ರಸವನ್ನು ಹೀರುವುದರಿಂದ ಕಾಳುಗಳು ಜೊಳ್ಳಾಗುವುದಲ್ಲದೆ, ರಸ ಹಿರಿರುವ ಕಾಳುಗಳ ಜಾಗದಲ್ಲಿ ಕಪ್ಪು ಚುಕ್ಕೆ ಕಾಣುತ್ತವೆ, ಇದರಿಂದ ಭತ್ತದ ಇಳುವರಿ ಕಡಿಯಾಗುವದಲ್ಲದೆ ಭತ್ತದ ಮಾರುಕಟ್ಟೆ ಬೆಲೆಯು ಕಡಿಮೆಯಾಗಿ ರೈತರು ಆರ್ಥಿಕ ನಷ್ಠ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಕೀಟದ ಸಮಗ್ರ ನಿರ್ವಹಣೆ ತುಂಬಾ ಅವಶ್ಯಕವೆಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ತಿಳಿಸಿದರು. ಈ ಕೀಟದ ಸಮಗ್ರ ನಿರ್ವಹಣೆಗಾಗಿ ರೈತರು ಭತ್ತದ ಗದ್ದೆಯಲ್ಲಿ ಮತ್ತು ಬದುಗಳಲ್ಲಿರುವ ಕಳೆಗಳನ್ನು ತೆಗೆದು ಸ್ವಚ್ಛತೆಯನ್ನು ಕಾಪಾಡಬೇಕು. ಹಾಗೆಯೇ 5 ಮಿಲಿ ಅಝಾಡಿರಚ್ಟಿನ್ 0.03 % (ಕಹಿ ಬೇವಿನ ಎಣ್ಣೆ) ಅಥವಾ 2 ಮಿಲಿ ಫಿಪ್ರೊನಿಲ್ 5% ಎಸ್ ಸಿ ಅಥವಾ 0.6 ಮಿಲಿ ಇಮೀಡಾಕ್ಲೋಪ್ರಿಡ್ 06% + ಲಾಂಬ್ಧಾ ಸೈಹಲೋತ್ರೀನ್ 04 % ಎಸ್ ಎಲ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಅಥವಾ ಸಾಯಂಕಾಲದ ಸಮಯದಲ್ಲಿ ಸಿಂಪರಣೆ ಮಾಡಬೇಕು ಎಂದು ತಿಳಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…