ಜನ ಮನದ ನಾಡಿ ಮಿಡಿತ

Advertisement

ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 12.5 ಲಕ್ಷ ರೂ. ಗೆದ್ದ ಕಾರ್ಕಳ ಮೂಲದ ಡಾ. ಶ್ರೀಶ್ ಶೆಟ್ಟಿ

ಉಡುಪಿ: ಕೌನ್‌ ಬನೇಗಾ ಕರೋಡ್‌ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್‌ ಸತೀಶ್‌ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.

 


ಅ. 10 ಮತ್ತು 11 ರಂದು ಸೋನಿ ಟಿವಿಯಲ್ಲಿ ಅವರ ಸಂಚಿಕೆ ಪ್ರಸಾರಗೊಂಡಿದೆ. ಶ್ರೀಶ್ ಸತೀಶ್ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದರು. 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಹೆಸರು ಕೇಳಲಾಗಿತ್ತು. ಜನರಲ್ ಕೆ.ಎಂ. ಕಾರ್ಯಪ್ಪ, ವಿಜಯ ತೆಂಡೂಲ್ಕರ್‌, ಪಂ. ಭೀಮಸೇನ್‌ ಜೋಷಿ ಹಾಗೂ ರಾಜ್‌ ಕಪೂರ್‌ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟತೆ ಇರದೇ ಇದ್ದುದರಿಂದ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ್‌ ಸತೀಶ್‌ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರಿವಲ್ಲಿ ಶೆಟ್ಟಿ ಮತ್ತು ಸುರತ್ಕಲ್‌ ದೇವಿ ನಿಲಯ ಸತೀಶ್‌ ಶೆಟ್ಟಿಯವರ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್‌ನ ಅಹಮದಾಬಾದ್‌ ನಲ್ಲಿ ನೆಲೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!