ಉಡುಪಿ: ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್ ಸತೀಶ್ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.
ಅ. 10 ಮತ್ತು 11 ರಂದು ಸೋನಿ ಟಿವಿಯಲ್ಲಿ ಅವರ ಸಂಚಿಕೆ ಪ್ರಸಾರಗೊಂಡಿದೆ. ಶ್ರೀಶ್ ಸತೀಶ್ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದರು. 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಹೆಸರು ಕೇಳಲಾಗಿತ್ತು. ಜನರಲ್ ಕೆ.ಎಂ. ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ. ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟತೆ ಇರದೇ ಇದ್ದುದರಿಂದ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ್ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರಿವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ದೇವಿ ನಿಲಯ ಸತೀಶ್ ಶೆಟ್ಟಿಯವರ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…