ಜನ ಮನದ ನಾಡಿ ಮಿಡಿತ

Advertisement

ಲೋಕಸಭಾ ಚುನಾವಣೆಯಲ್ಲಿ “ಗ್ಯಾರಂಟಿ” ಭರವಸೆ, ಕಾಂಗ್ರೆಸ್ ಗೆಲುವಿನ ತಂತ್ರ

ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.

ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!