ಜನ ಮನದ ನಾಡಿ ಮಿಡಿತ

Advertisement

ಲೋಕಸಭಾ ಚುನಾವಣೆಯಲ್ಲಿ “ಗ್ಯಾರಂಟಿ” ಭರವಸೆ, ಕಾಂಗ್ರೆಸ್ ಗೆಲುವಿನ ತಂತ್ರ

ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.

ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!