ಜನ ಮನದ ನಾಡಿ ಮಿಡಿತ

Advertisement

ಲೋಕಸಭಾ ಚುನಾವಣೆಯಲ್ಲಿ “ಗ್ಯಾರಂಟಿ” ಭರವಸೆ, ಕಾಂಗ್ರೆಸ್ ಗೆಲುವಿನ ತಂತ್ರ

ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.

ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!