ರಾಷ್ಟ್ರ

ಲೋಕಸಭಾ ಚುನಾವಣೆಯಲ್ಲಿ “ಗ್ಯಾರಂಟಿ” ಭರವಸೆ, ಕಾಂಗ್ರೆಸ್ ಗೆಲುವಿನ ತಂತ್ರ

ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.

ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

2 days ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

2 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

2 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

3 days ago

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…

3 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…

3 days ago