ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕ ರೂಪೇಶ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗೆನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಇತ್ತೀಚೆಗೆ ಇದೊಂದು ಅಪಘಾತ ಸ್ಪಾಟ್ ಆಗಿ ಪರಿವರ್ತನೆ ಆಗುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…