ಮುಲ್ಕಿ: ಬಂಟರ ಸಂಘದ ವತಿಯಿಂದ 2023-24 ನೇ ಸಾಲಿನ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಮುಲ್ಕಿ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ 2024ನೇ ಸಾಲಿನ ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನವನ್ನು ವಿಕೆ ಗ್ರೂಪ್ ಚೇರ್ಮನ್ ಕರುಣಾಕರ ಎಂ ಶೆಟ್ಟಿ, ಮಧ್ಯ ಗುತ್ತುರವರಿಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ರವರು ಪ್ರಧಾನ ಮಾಡಿ ಮಾತನಾಡಿ ನಶಿಸಿ ಹೋಗುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಕಾರ್ಯ ಸಂಘ-ಸಂಸ್ಥೆಗಳಿಂದ ಆಗಬೇಕು, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಸ್ತ ಅಭಿನಂದನೀಯ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಂದಿಕೂರು ಎಜುಕೇಶನ್ ಟ್ರಸ್ಟ್ ನ ಅನಿಲ್ ಶೆಟ್ಟಿ ಕೋಂಜಾಲುಗುತ್ತು, ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿಯ ಚೇರ್ಮನ್ ಉಮೇಶ್ ಕುಮಾರ್ ಶೆಟ್ಟಿ , ಮುಲ್ಕಿ ಸುಂದರಾಮ ಶೆಟ್ಟಿ ಟ್ರಸ್ಟ್ ನ ಟ್ರಸ್ಟಿ ಸುಕುಮಾರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಉಮೇಶ್ ಕುಮಾರ್ ಶೆಟ್ಟಿ,ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ಶರತ್ ಶೆಟ್ಟಿ, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ ಐಕಳ, ಯುವ ವಿಭಾಗದ ಸಂಚಾಲಕ ದಾಮೋದರ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ರೋಹಿಣಿ ಶೆಟ್ಟಿ, ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಂಟರ ಸಂಘ ಬೆಂಗಳೂರು ಹಾಗೂ ಜಾಗತಿಕ ಬಂಟರ ಸಂಘದ ಒಕ್ಕೂಟ ಮಂಗಳೂರು ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ, ಮುಲ್ಕಿ ಸುಂದರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬಪ್ಪನಾಡು ವಾಗ್ದೇವಿ ದಾಸಪ್ಪ ಶೆಟ್ಟಿ ಚಾರಿಟೇಬಲ್p ಟ್ರಸ್ಟ್ , ಕುಬೆವೂರು ಶಾಂತ ಸಂಜೀವ ಭಂಡಾರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದ ಸಾಧಕರಾದ ಹರೀಶ್ ಶೆಟ್ಟಿ ತಂಗಾಳಿ ಪಂಜಿನಡ್ಕ (ಕೃಷಿ ಕ್ಷೇತ್ರ), ಮೇಘಶ್ರೀ ಶೆಟ್ಟಿ ಕೊಡೆತ್ತೂರು(ಅಂತರಾಷ್ಟ್ರೀಯ ಯೋಗ ಸಾಧಕಿ), ಪ್ರತೀಕ್ಷಾಶೆಟ್ಟಿ ಪಂಜ ಮೊಗಪಾಡಿ (ಶಿಕ್ಷಣ ಕ್ಷೇತ್ರ), ದೀಪಾ ಎಂ ಹೆಗ್ಡೆ, ಚರಿಷ್ಮಾ ಶೆಟ್ಟಿ ಬಪ್ಪನಾಡು ಗುತ್ತು,(ಡಾಕ್ಟರೇಟ್ ಪದವಿ), ತಸ್ಮಯಿ ಎಂ. ಶೆಟ್ಟಿ ಮಿತ್ತಬೈಲುಗುತ್ತು (ರಾಷ್ಟ್ರೀಯ ಮಟ್ಟದ ಸ್ಕೇಟರ್) ರವರನ್ನು ಗೌರವಿಸಲಾಯಿತು.
ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಡಾ.ಸುಧಾರಾಣಿ ನಿರೂಪಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…