ಉಪ್ಪಿನಂಗಡಿ: ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಪೆರಿಯಡ್ಕ ಸಹಕಾರಿ ಸಂಘದ ಶಾಖಾ ಕಟ್ಟಡದ ಮುಂಭಾಗದಲ್ಲಿ ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ದೃಶ್ಯ . ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೂಡಲೇ ಸ್ಥಳೀಯ ಕೆಲ ಯುವಕರು ಈತನ ಚಲನವಲನವನ್ನು ದೂರದಿಂದ ನೋಡಿದ್ದಾರೆ. ಬಳಿಕ ಅವರು ಹತ್ತಿರ ಬರುತ್ತಿದ್ದಂತೆ ಈತ ಪರಾರಿಯಾಗಿದ್ದಾನೆ. ಘಟನೆ ಕುರಿತು ಉಪ್ಪಿನಂಗಡಿ ಪೊಲೀಸರಿಗೂ ದೂರು ನೀಡಲಾಗಿದೆ. ಆದರೆ ಸಿಸಿ ಕ್ಯಾಮರಾದಲ್ಲಿ ಈತನ ಮುಖದ ಚಿತ್ರಣ ಸ್ಪಷ್ಟವಾಗಿ ಕಂಡುಬರದ ಹಿನ್ನಲೆಯಲ್ಲಿ ಕಳ್ಳನ ಪತ್ತೆಯ ಕಾರ್ಯಕ್ಕೆ ತಡೆಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರ ಪ್ರಕಾರ ಈತ ಬೇರೆ ಊರಿನ ವ್ಯಕ್ತಿ. ಪೂರ್ತಿಯಾಗಿ ರೈನ್ ಕೋಟ್ ಹಾಕಿರುವ ಕಾರಣ ಈತನ ಮುಖ ಸ್ಪಷ್ಟವಾಗಿ ಕಂಡುಬರಲಿಲ್ಲ. ಈತನನ್ನು ಪೆರಿಯಡ್ಕದ ಸಮೀಪದ ಓಡ್ಲ ತನಕ ಯುವಕರು ಬೆನ್ನಟ್ಟಿದ್ದು, ಕಳ್ಳ ಪರಾರಿಯಾಗಿದ್ದಾನೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…