ಉಪ್ಪಿನಂಗಡಿ: ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಪೆರಿಯಡ್ಕ ಸಹಕಾರಿ ಸಂಘದ ಶಾಖಾ ಕಟ್ಟಡದ ಮುಂಭಾಗದಲ್ಲಿ ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ದೃಶ್ಯ . ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೂಡಲೇ ಸ್ಥಳೀಯ ಕೆಲ ಯುವಕರು ಈತನ ಚಲನವಲನವನ್ನು ದೂರದಿಂದ ನೋಡಿದ್ದಾರೆ. ಬಳಿಕ ಅವರು ಹತ್ತಿರ ಬರುತ್ತಿದ್ದಂತೆ ಈತ ಪರಾರಿಯಾಗಿದ್ದಾನೆ. ಘಟನೆ ಕುರಿತು ಉಪ್ಪಿನಂಗಡಿ ಪೊಲೀಸರಿಗೂ ದೂರು ನೀಡಲಾಗಿದೆ. ಆದರೆ ಸಿಸಿ ಕ್ಯಾಮರಾದಲ್ಲಿ ಈತನ ಮುಖದ ಚಿತ್ರಣ ಸ್ಪಷ್ಟವಾಗಿ ಕಂಡುಬರದ ಹಿನ್ನಲೆಯಲ್ಲಿ ಕಳ್ಳನ ಪತ್ತೆಯ ಕಾರ್ಯಕ್ಕೆ ತಡೆಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರ ಪ್ರಕಾರ ಈತ ಬೇರೆ ಊರಿನ ವ್ಯಕ್ತಿ. ಪೂರ್ತಿಯಾಗಿ ರೈನ್ ಕೋಟ್ ಹಾಕಿರುವ ಕಾರಣ ಈತನ ಮುಖ ಸ್ಪಷ್ಟವಾಗಿ ಕಂಡುಬರಲಿಲ್ಲ. ಈತನನ್ನು ಪೆರಿಯಡ್ಕದ ಸಮೀಪದ ಓಡ್ಲ ತನಕ ಯುವಕರು ಬೆನ್ನಟ್ಟಿದ್ದು, ಕಳ್ಳ ಪರಾರಿಯಾಗಿದ್ದಾನೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…