ಉಪ್ಪಿನಂಗಡಿ: ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಪೆರಿಯಡ್ಕ ಸಹಕಾರಿ ಸಂಘದ ಶಾಖಾ ಕಟ್ಟಡದ ಮುಂಭಾಗದಲ್ಲಿ ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ದೃಶ್ಯ . ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೂಡಲೇ ಸ್ಥಳೀಯ ಕೆಲ ಯುವಕರು ಈತನ ಚಲನವಲನವನ್ನು ದೂರದಿಂದ ನೋಡಿದ್ದಾರೆ. ಬಳಿಕ ಅವರು ಹತ್ತಿರ ಬರುತ್ತಿದ್ದಂತೆ ಈತ ಪರಾರಿಯಾಗಿದ್ದಾನೆ. ಘಟನೆ ಕುರಿತು ಉಪ್ಪಿನಂಗಡಿ ಪೊಲೀಸರಿಗೂ ದೂರು ನೀಡಲಾಗಿದೆ. ಆದರೆ ಸಿಸಿ ಕ್ಯಾಮರಾದಲ್ಲಿ ಈತನ ಮುಖದ ಚಿತ್ರಣ ಸ್ಪಷ್ಟವಾಗಿ ಕಂಡುಬರದ ಹಿನ್ನಲೆಯಲ್ಲಿ ಕಳ್ಳನ ಪತ್ತೆಯ ಕಾರ್ಯಕ್ಕೆ ತಡೆಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರ ಪ್ರಕಾರ ಈತ ಬೇರೆ ಊರಿನ ವ್ಯಕ್ತಿ. ಪೂರ್ತಿಯಾಗಿ ರೈನ್ ಕೋಟ್ ಹಾಕಿರುವ ಕಾರಣ ಈತನ ಮುಖ ಸ್ಪಷ್ಟವಾಗಿ ಕಂಡುಬರಲಿಲ್ಲ. ಈತನನ್ನು ಪೆರಿಯಡ್ಕದ ಸಮೀಪದ ಓಡ್ಲ ತನಕ ಯುವಕರು ಬೆನ್ನಟ್ಟಿದ್ದು, ಕಳ್ಳ ಪರಾರಿಯಾಗಿದ್ದಾನೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…