ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಹೊಡೆದಾಡಿಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಜಗದೀಶ್, ಉಗ್ರಂ ಮಂಜು ಹಾಗೂ ರಂಜಿತ್ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.
ಬಿಗ್ಬಾಸ್ ಸೀಸನ್ 11ರ ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಕೈ ಕೈ ಮಿಲಾಯಿಸಿದ್ದು, ಇಬ್ಬರನ್ನು ಎವಿಕ್ಷನ್ ಮಾಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ನಿನ್ನೆಯಿಂದಲೂ ಸ್ಪರ್ಧಿಗಳ ಮಧ್ಯೆ ಅತಿರೇಕದ ಜಗಳ ನಡೆಯುತ್ತಿತ್ತು.
ಕಳೆದ ಸೋಮವಾರ ಚೈತ್ರಾ ಕುಂದಾಪುರ ಜೊತೆ ಜಗದೀಶ್ ಅವರು ಜಗಳ ಮಾಡಿದ್ದರು. ಸಿಟ್ಟಿಗೆದ್ದ ಚೈತ್ರಾ ಅವರು ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡು ಎಂದು ಸವಾಲು ಹಾಕಿದ್ದರು. ಚೈತ್ರಾ, ಜಗದೀಶ್ ಕೆಂಗಣ್ಣಿನಿಂದ ಗುರಾಯಿಸಿದ್ದು, ಮನೆಯ ವಾತಾವರಣ ರಣರಂಗವಾಗುವಂತೆ ಮಾಡಿತ್ತು.
ನಿನ್ನೆ ರಾತ್ರಿ ರಂಜಿತ್ ಮತ್ತು ಜಗದೀಶ್ ಹಾಗೂ ಉಗ್ರಂ ಮಂಜು ಮತ್ತು ಜಗದೀಶ್ ಮಧ್ಯೆ ಜೋರು ಗಲಾಟೆಯಾಗಿದೆ. ಬಿಗ್ಬಾಸ್ ಶೋ ಬಗ್ಗೆ ಜಗದೀಶ್ ಅವರು ಅವಾಚ್ಯವಾಗಿ ಮಾತನಾಡುತ್ತಿದ್ದು ಈ ಬಗ್ಗೆ ಎಲ್ಲಾ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಾಗ್ವಾದದ ಮಧ್ಯೆ ಮಾನಸ ವಿಚಾರವಾಗಿ ರಂಜಿತ್ ಮತ್ತು ಜಗದೀಶ್ ಮಧ್ಯೆ ಜಗಳವಾಗಿದ್ದು ಅತಿರೇಕದ ಹಂತಕ್ಕೆ ಹೋಗಿದೆ.
ಇದಾದ ಮೇಲೆ ರಂಜಿತ್ ಮತ್ತು ಜಗದೀಶ್ ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದು ಬಿಗ್ ಬಾಸ್ ಮನೆಯಿಂದ ಎವಿಕ್ಷನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಈ ರೀತಿ ಸ್ಪರ್ಧಿಗಳು ಔಟ್ ಆಗಿರೋದು ಇದೇ ಮೊದಲಲ್ಲ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ಹಿಂದೆ ಹುಚ್ಚ ವೆಂಕಟ್ನ ಶೋನಿಂದ ಎವಿಕ್ಷನ್ ಮಾಡಲಾಗಿತ್ತು. ಎರಡನೇ ಬಾರಿಗೆ ಕಿರಿಕ್ ಪಾರ್ಟಿ ಸಿನಿಮಾದ ನಟಿ ಸಂಯುಕ್ತ ಹೆಗೆಡೆ ಅವರು ಎವಿಕ್ಷನ್ ಆಗಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…