ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಹೊಡೆದಾಡಿಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಜಗದೀಶ್, ಉಗ್ರಂ ಮಂಜು ಹಾಗೂ ರಂಜಿತ್ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.
ಬಿಗ್ಬಾಸ್ ಸೀಸನ್ 11ರ ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಕೈ ಕೈ ಮಿಲಾಯಿಸಿದ್ದು, ಇಬ್ಬರನ್ನು ಎವಿಕ್ಷನ್ ಮಾಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ನಿನ್ನೆಯಿಂದಲೂ ಸ್ಪರ್ಧಿಗಳ ಮಧ್ಯೆ ಅತಿರೇಕದ ಜಗಳ ನಡೆಯುತ್ತಿತ್ತು.
ಕಳೆದ ಸೋಮವಾರ ಚೈತ್ರಾ ಕುಂದಾಪುರ ಜೊತೆ ಜಗದೀಶ್ ಅವರು ಜಗಳ ಮಾಡಿದ್ದರು. ಸಿಟ್ಟಿಗೆದ್ದ ಚೈತ್ರಾ ಅವರು ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡು ಎಂದು ಸವಾಲು ಹಾಕಿದ್ದರು. ಚೈತ್ರಾ, ಜಗದೀಶ್ ಕೆಂಗಣ್ಣಿನಿಂದ ಗುರಾಯಿಸಿದ್ದು, ಮನೆಯ ವಾತಾವರಣ ರಣರಂಗವಾಗುವಂತೆ ಮಾಡಿತ್ತು.
ನಿನ್ನೆ ರಾತ್ರಿ ರಂಜಿತ್ ಮತ್ತು ಜಗದೀಶ್ ಹಾಗೂ ಉಗ್ರಂ ಮಂಜು ಮತ್ತು ಜಗದೀಶ್ ಮಧ್ಯೆ ಜೋರು ಗಲಾಟೆಯಾಗಿದೆ. ಬಿಗ್ಬಾಸ್ ಶೋ ಬಗ್ಗೆ ಜಗದೀಶ್ ಅವರು ಅವಾಚ್ಯವಾಗಿ ಮಾತನಾಡುತ್ತಿದ್ದು ಈ ಬಗ್ಗೆ ಎಲ್ಲಾ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಾಗ್ವಾದದ ಮಧ್ಯೆ ಮಾನಸ ವಿಚಾರವಾಗಿ ರಂಜಿತ್ ಮತ್ತು ಜಗದೀಶ್ ಮಧ್ಯೆ ಜಗಳವಾಗಿದ್ದು ಅತಿರೇಕದ ಹಂತಕ್ಕೆ ಹೋಗಿದೆ.
ಇದಾದ ಮೇಲೆ ರಂಜಿತ್ ಮತ್ತು ಜಗದೀಶ್ ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದು ಬಿಗ್ ಬಾಸ್ ಮನೆಯಿಂದ ಎವಿಕ್ಷನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಈ ರೀತಿ ಸ್ಪರ್ಧಿಗಳು ಔಟ್ ಆಗಿರೋದು ಇದೇ ಮೊದಲಲ್ಲ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ಹಿಂದೆ ಹುಚ್ಚ ವೆಂಕಟ್ನ ಶೋನಿಂದ ಎವಿಕ್ಷನ್ ಮಾಡಲಾಗಿತ್ತು. ಎರಡನೇ ಬಾರಿಗೆ ಕಿರಿಕ್ ಪಾರ್ಟಿ ಸಿನಿಮಾದ ನಟಿ ಸಂಯುಕ್ತ ಹೆಗೆಡೆ ಅವರು ಎವಿಕ್ಷನ್ ಆಗಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…