ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಹೊಡೆದಾಡಿಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಜಗದೀಶ್, ಉಗ್ರಂ ಮಂಜು ಹಾಗೂ ರಂಜಿತ್ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.
ಬಿಗ್ಬಾಸ್ ಸೀಸನ್ 11ರ ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಕೈ ಕೈ ಮಿಲಾಯಿಸಿದ್ದು, ಇಬ್ಬರನ್ನು ಎವಿಕ್ಷನ್ ಮಾಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ನಿನ್ನೆಯಿಂದಲೂ ಸ್ಪರ್ಧಿಗಳ ಮಧ್ಯೆ ಅತಿರೇಕದ ಜಗಳ ನಡೆಯುತ್ತಿತ್ತು.
ಕಳೆದ ಸೋಮವಾರ ಚೈತ್ರಾ ಕುಂದಾಪುರ ಜೊತೆ ಜಗದೀಶ್ ಅವರು ಜಗಳ ಮಾಡಿದ್ದರು. ಸಿಟ್ಟಿಗೆದ್ದ ಚೈತ್ರಾ ಅವರು ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡು ಎಂದು ಸವಾಲು ಹಾಕಿದ್ದರು. ಚೈತ್ರಾ, ಜಗದೀಶ್ ಕೆಂಗಣ್ಣಿನಿಂದ ಗುರಾಯಿಸಿದ್ದು, ಮನೆಯ ವಾತಾವರಣ ರಣರಂಗವಾಗುವಂತೆ ಮಾಡಿತ್ತು.
ನಿನ್ನೆ ರಾತ್ರಿ ರಂಜಿತ್ ಮತ್ತು ಜಗದೀಶ್ ಹಾಗೂ ಉಗ್ರಂ ಮಂಜು ಮತ್ತು ಜಗದೀಶ್ ಮಧ್ಯೆ ಜೋರು ಗಲಾಟೆಯಾಗಿದೆ. ಬಿಗ್ಬಾಸ್ ಶೋ ಬಗ್ಗೆ ಜಗದೀಶ್ ಅವರು ಅವಾಚ್ಯವಾಗಿ ಮಾತನಾಡುತ್ತಿದ್ದು ಈ ಬಗ್ಗೆ ಎಲ್ಲಾ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಾಗ್ವಾದದ ಮಧ್ಯೆ ಮಾನಸ ವಿಚಾರವಾಗಿ ರಂಜಿತ್ ಮತ್ತು ಜಗದೀಶ್ ಮಧ್ಯೆ ಜಗಳವಾಗಿದ್ದು ಅತಿರೇಕದ ಹಂತಕ್ಕೆ ಹೋಗಿದೆ.
ಇದಾದ ಮೇಲೆ ರಂಜಿತ್ ಮತ್ತು ಜಗದೀಶ್ ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದು ಬಿಗ್ ಬಾಸ್ ಮನೆಯಿಂದ ಎವಿಕ್ಷನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಈ ರೀತಿ ಸ್ಪರ್ಧಿಗಳು ಔಟ್ ಆಗಿರೋದು ಇದೇ ಮೊದಲಲ್ಲ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ಹಿಂದೆ ಹುಚ್ಚ ವೆಂಕಟ್ನ ಶೋನಿಂದ ಎವಿಕ್ಷನ್ ಮಾಡಲಾಗಿತ್ತು. ಎರಡನೇ ಬಾರಿಗೆ ಕಿರಿಕ್ ಪಾರ್ಟಿ ಸಿನಿಮಾದ ನಟಿ ಸಂಯುಕ್ತ ಹೆಗೆಡೆ ಅವರು ಎವಿಕ್ಷನ್ ಆಗಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…