ಕರಾವಳಿ

“ಶಿಕ್ಷಣ ಸಂಸ್ಥೆಗೆಂದು ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ -ಮಂಜುನಾಥ ಭಂಡಾರಿ

ಬೆಂಗಳೂರು: ”ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಹೋಟೆಲ್ ತೆರೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರು ನಿವೇಶನ ಹಿಂದಿರುಗಿಸಿ ಆದರ್ಶ ಮೆರೆಯಲಿ“ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ”5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು“ ಎಂದಿದ್ದಾರೆ.
”ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸುವುದಾಗಿ ಕರ್ನಾಟಕ ಹೌಸಿಂಗ್ ಬೋರ್ಡ್ ನಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಈಗ ನಾರಾಯಣಸ್ವಾಮಿ ಅವರೂ ಶಿಕ್ಷಣ ಸಂಸ್ಥೆ ಸ್ಥಾಪನೆಗೆಂದು ಮಂಜೂರಾದ ಜಮೀನನನ್ನು ವಾಪಸ್ ಮಾಡಿ ರಾಹುಲ್ ಖರ್ಗೆ ಅವರಂತೆ ಆದರ್ಶರಾಗುತ್ತಾರಾ? ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರ್ ಎಸ್ ಎಸ್ ನವರು ವಾಪಸ್ ಮಾಡುವ ಮೂಲಕ ಆದರ್ಶ ತೋರಿಸಲಿ“ ಎಂದು ಹೇಳಿದ್ದಾರೆ.
”ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕೆ (ಸಿಎ) ಮೀಸಲಿಟ್ಟಿರುವ ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ರಾಷ್ಟ್ರೋತ್ಥಾನ ಪರಿಷತ್ ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಇದರಿಂದ ಸರ್ಕಾರಕ್ಕೆ 7.50 ಕೋಟಿ ರೂ. ನಷ್ಟವಾಗಿದೆ. ಈಗ ರಾಷ್ಟ್ರೋತ್ಥಾನ ಪರಿಷತ್ ನವರು ಸಹ ಭೂಮಿಯನ್ನು ಹಿಂದಿರುಗಿಸುವರೇ?
ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ನವರು ತಮ್ಮ ಆದರ್ಶವನ್ನು ತೋರಿಸುತ್ತಾರಾ?“ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago