ಕರಾವಳಿ

“ಶಿಕ್ಷಣ ಸಂಸ್ಥೆಗೆಂದು ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ -ಮಂಜುನಾಥ ಭಂಡಾರಿ

ಬೆಂಗಳೂರು: ”ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಹೋಟೆಲ್ ತೆರೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರು ನಿವೇಶನ ಹಿಂದಿರುಗಿಸಿ ಆದರ್ಶ ಮೆರೆಯಲಿ“ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ”5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು“ ಎಂದಿದ್ದಾರೆ.
”ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸುವುದಾಗಿ ಕರ್ನಾಟಕ ಹೌಸಿಂಗ್ ಬೋರ್ಡ್ ನಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಈಗ ನಾರಾಯಣಸ್ವಾಮಿ ಅವರೂ ಶಿಕ್ಷಣ ಸಂಸ್ಥೆ ಸ್ಥಾಪನೆಗೆಂದು ಮಂಜೂರಾದ ಜಮೀನನನ್ನು ವಾಪಸ್ ಮಾಡಿ ರಾಹುಲ್ ಖರ್ಗೆ ಅವರಂತೆ ಆದರ್ಶರಾಗುತ್ತಾರಾ? ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರ್ ಎಸ್ ಎಸ್ ನವರು ವಾಪಸ್ ಮಾಡುವ ಮೂಲಕ ಆದರ್ಶ ತೋರಿಸಲಿ“ ಎಂದು ಹೇಳಿದ್ದಾರೆ.
”ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕೆ (ಸಿಎ) ಮೀಸಲಿಟ್ಟಿರುವ ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ರಾಷ್ಟ್ರೋತ್ಥಾನ ಪರಿಷತ್ ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಇದರಿಂದ ಸರ್ಕಾರಕ್ಕೆ 7.50 ಕೋಟಿ ರೂ. ನಷ್ಟವಾಗಿದೆ. ಈಗ ರಾಷ್ಟ್ರೋತ್ಥಾನ ಪರಿಷತ್ ನವರು ಸಹ ಭೂಮಿಯನ್ನು ಹಿಂದಿರುಗಿಸುವರೇ?
ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ನವರು ತಮ್ಮ ಆದರ್ಶವನ್ನು ತೋರಿಸುತ್ತಾರಾ?“ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

22 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

23 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

1 day ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago