ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲ ವತಿಯಿಂದ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮಸ್ಥರ ಸಹಕಾರದೊಂದಿಗೆ ತುಳುನಾಡ ತುಡರ್ ಯುವಕ ಮಂಡಲದ ಮೂರನೇ ರ್ಷದ ವರ್ಷಿಕ ಕ್ರೀಡಾಕೂಟದ ಅಂಗವಾಗಿ ಸಬ್ ಜೂನಿಯರ್ ವಿಭಾಗದ ನೇಗಿಲು ಕಿರಿಯ ಮತ್ತು ಜೂನಿಯರ್ ವಿಭಾಗದ ಹಗ್ಗ ಕಿರಿಯ ಮಟ್ಟದ ಕೆಸರು ಗದ್ದೆಯ ಸರ್ಯ-ಚಂದ್ರ ಜೋಡುಕರೆ ಕಂಬಳ ಸ್ನೇಹಕೂಟ ಕರ್ಯಕ್ರಮ ಅ.20ರಂದು ಬೆಳಗ್ಗೆ ಗಂಟೆ 9ರಿಂದ ರೆಂಜಿಲಾಡಿ ಗ್ರಾಮದ ದಿ|ಆರ್.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ರ್ಚಕ ಕೃಷ್ಣ ಹೆಬ್ಬಾರ್ ಕರ್ಯಕ್ರಮ ಉದ್ಘಾಟಿಸುವರು. ರೆಂಜಿಲಾಡಿ ಬೀ

ಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಕಂಬಳ ಕರೆ ಉದ್ಘಾಟಿಸುವರು. ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷ ತಿರುಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸುವರು. ಸಂಜೆ 3ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ತಿರುಮಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸೇರಿದಂತೆ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ಯಕ್ರಮದಲ್ಲಿ ಯುವ ಕಂಬಳ ಓಟಗಾರ ಕೃತಿಕ್ ಪೆರಂಗಲ್, ಹಿರಿಯ ಕಂಬಳ ಓಟಗಾರ ರವಿರಾಜ್ ಜೈನ್ ಹೇರ ಅವರನ್ನು ಸಮ್ಮಾನಿಸುವ ಕರ್ಯಕ್ರಮ ನಡೆಯಲಿದೆ.




