ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲ ವತಿಯಿಂದ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮಸ್ಥರ ಸಹಕಾರದೊಂದಿಗೆ ತುಳುನಾಡ ತುಡರ್ ಯುವಕ ಮಂಡಲದ ಮೂರನೇ ರ್ಷದ ವರ್ಷಿಕ ಕ್ರೀಡಾಕೂಟದ ಅಂಗವಾಗಿ ಸಬ್ ಜೂನಿಯರ್ ವಿಭಾಗದ ನೇಗಿಲು ಕಿರಿಯ ಮತ್ತು ಜೂನಿಯರ್ ವಿಭಾಗದ ಹಗ್ಗ ಕಿರಿಯ ಮಟ್ಟದ ಕೆಸರು ಗದ್ದೆಯ ಸರ್ಯ-ಚಂದ್ರ ಜೋಡುಕರೆ ಕಂಬಳ ಸ್ನೇಹಕೂಟ ಕರ್ಯಕ್ರಮ ಅ.20ರಂದು ಬೆಳಗ್ಗೆ ಗಂಟೆ 9ರಿಂದ ರೆಂಜಿಲಾಡಿ ಗ್ರಾಮದ ದಿ|ಆರ್.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ರ್ಚಕ ಕೃಷ್ಣ ಹೆಬ್ಬಾರ್ ಕರ್ಯಕ್ರಮ ಉದ್ಘಾಟಿಸುವರು. ರೆಂಜಿಲಾಡಿ ಬೀ
ಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಕಂಬಳ ಕರೆ ಉದ್ಘಾಟಿಸುವರು. ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷ ತಿರುಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸುವರು. ಸಂಜೆ 3ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ತಿರುಮಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸೇರಿದಂತೆ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ಯಕ್ರಮದಲ್ಲಿ ಯುವ ಕಂಬಳ ಓಟಗಾರ ಕೃತಿಕ್ ಪೆರಂಗಲ್, ಹಿರಿಯ ಕಂಬಳ ಓಟಗಾರ ರವಿರಾಜ್ ಜೈನ್ ಹೇರ ಅವರನ್ನು ಸಮ್ಮಾನಿಸುವ ಕರ್ಯಕ್ರಮ ನಡೆಯಲಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…