ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.
ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ ೧೨.೩೦ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ ಕೆನ್ನಾಲೆ ಮನೆಯ ಕಿಟಕಿ, ತಾರಸಿಗೂ ತಗಲಿದೆ. ಮನೆಮಂದಿ ಎಚ್ಚೆತ್ತು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದರಿAದಾಗಿ ಸಂಭಾವ್ಯ ಅನಾಹುತ ತಪ್ಪಿದೆ. ಬೆಂಕಿಯಿAದಾಗಿ ಮನೆಗೂ ಹಾನಿಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಸಂಭವಿಸಿರುವ ಶಂಕೆಯಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…