ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ..!!

 ಅಪ್ರಾಪ್ತ ಪ್ರಾಯದ ಇರ್ವರು ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.

 

ಬೀಚಿನಲ್ಲಿ ವಿಹರಿಸುತ್ತಿದ್ದ ಇರ್ವರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಅವರಿಗೆ, ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಕಾನ್ಸ್ಟೇಬಲ್ ಮಹದೇವ್ ಅವರೊಂದಿಗೆ ಒಳಕಾಡುವರು ಬೀಚಿಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ. ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!