ಅಪ್ರಾಪ್ತ ಪ್ರಾಯದ ಇರ್ವರು ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.
ಬೀಚಿನಲ್ಲಿ ವಿಹರಿಸುತ್ತಿದ್ದ ಇರ್ವರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಅವರಿಗೆ, ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.
ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಕಾನ್ಸ್ಟೇಬಲ್ ಮಹದೇವ್ ಅವರೊಂದಿಗೆ ಒಳಕಾಡುವರು ಬೀಚಿಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ. ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…