ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು ತಾನೇ ನಿರ್ದೇಶಿಸಲಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು.
ಅವರು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಶುಕ್ರವಾರ ರಾತ್ರಿ ಸಂದರ್ಶನಗೈದು ಮಾತನಾಡಿದರು.
ಕುತ್ತಾರು ಆದಿಸ್ಥಳ ಮತ್ತು ಕಲ್ಲಾಪುವಿನ ಎರಡೂ ಕ್ಷೇತ್ರಗಳಲ್ಲಿ ವೈಬ್ರೇಷನ್ ಪವರ್ ಇದೆ . ತಾನು ನಟಿಸುತ್ತಿರುವ 29 ನೇ ಚಿತ್ರ, ಕಾಟೇರಾ ದ ಜಡೇಶ್ ಅವರು ನಿರ್ದೇಶಿಸುತ್ತಿದ್ದು, ಇನ್ನೂ ಚಿತ್ರದ ಹೆಸರನ್ನಿಟ್ಟಿಲ್ಲ. ಮೂರು ದಿನಗಳ ಕಾಲ ಮಂಗಳೂರಿನ ವಾಮಂಜೂರುಸೇರಿದಂತೆ ವಿವಿದೆಡೆ ಶೂಟಿಂಗ್ ನಡೆಯುತ್ತಿದೆ. ಹಾಗಾಗಿ ಮಂಗಳೂರು ಭೇಟಿ ನೀಡಿದ್ದು, ಕೊರಗಜ್ಜನ ಬಗ್ಗೆ ದಿನಾ ಕೇಳುತ್ತಲೇ ಇದ್ದೇನೆ. ಹಾಗಾಗಿ ಭೇಟಿ ನೀಡಬೇಕೆಂಬ ಮನದಾಸೆಯಿತ್ತು. ಇಲ್ಲಿ ಬಂದು ಆಶೋತ್ತರಗಳನ್ನು ಈಡೇರಿಸುವಂತೆ ಬೇಡಿಕೊಂಡಿದ್ದೇನೆ. ತನ್ನ ಭೀಮ ಚಿತ್ರಕ್ಕೆ ಮಂಗಳೂರು ಸೇರಿದಂತೆ ರಾಜ್ಯದ ಜನತೆ ಪ್ರೀತಿ, ವಿಶ್ವಾಸ ಇಟ್ಟು ಯಶಸ್ವಿಗೊಳಿಸಿದ್ದಾರೆ. ಈ ಮೂಲಕ ಸಿನೆಮಾದ ಗೌರವ ಉಳಿಸಿದ್ದಾರೆ ಎಂದರು.
ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು.ಕದ್ರಿ ಈವೆಂಟ್ಸ್ ನ ಸಂಚಾಲಕರಾದ ಜಗದೀಶ್ ಕದ್ರಿ, ದುನಿಯಾ ವಿಜಯ್ ಜತೆಯಲ್ಲಿದ್ದರು.
ಬುರ್ದುಗೋಳಿ ಕ್ಷೇತ್ರದ ಆಡಳಿತ ಸಮಿತಿಯ ಪುರುಷೋತ್ತಮ ಮೇಲಾಂಟ, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು , ಸಂಜಯ್,ಯೋಗಿಶ್, ಜಯಶ್ರೀ ಕೊಟ್ಟಾರಿ, ದೀಕ್ಷಾ ಕುತ್ತಾರು,ವನಿತ ಗಿರೀಶ್ ,ಗುರು ಪ್ರಸಾದ್ ಕೊಟ್ಟಾರಿ,ಪ್ರವೀಣ್ ಕೊಲ್ಯ,ಸದಾನಂದ ,ರೇಣುಕ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…