ಕರಾವಳಿ

ಸವಣೂರು ಸೀತಾರಾಮ ರೈಯವರಿಗೆ RUPSA ರಾಜ್ಯ ಪ್ರಶಸ್ತಿ : ಅ.21 ರಂದು ಬೆಂಗಳೂರಿನ ಜುಬಿ ಅಂತರಾಷ್ಟ್ರೀಯ “ಶಾಲಾ ಆಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ

ಸವಣೂರು: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳ ಸಂಘ (Recognised Unaided Private Schools’ Association of Karnataka) ಪ್ರಶಸ್ತಿಯು ಸವಣೂರಿನ ಶಿಲ್ಪಿ, ಸಹಕಾರ ರತ್ನ ಸವಣೂರು ಸೀತಾರಾಮ ರೈಯವರಿಗೆ ಒಲಿದು ಬಂದಿದೆ.

 

ಅಕ್ಟೋಬರ್ 21ರಂದು ಬೆಂಗಳೂರಿನ ಜುಬ್ಲಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ

ಸವಣೂರು ಸೀತಾರಾಮ ರೈ ಅವರು ಸವಣೂರಿನಲ್ಲಿ 2001 ರಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಸ್ಥಾಪನೆ ಮಾಡಿದ್ದು, ಆರಂಭದ ಹಂತದಲ್ಲಿ ಎಲ್ ಕೆಜಿಯಿಂದ ಪಿಯುಸಿ ತನಕ ಶಿಕ್ಷಣ ಆರಂಭಿಸಿದರು. 2012 ರಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಸ್ಥಾಪನೆ ಮಾಡಿದ್ದಾರೆ. ಸವಣೂರಿನ ಗ್ರಾಮೀಣ ಪ್ರದೇಶದಲ್ಲಿ ಸುಮಾರು 27 ಎಕ್ರೆ ಜಾಗದಲ್ಲಿ ಶಿಕ್ಷಣ ಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, ಬಳಿಕ ಡಿಎಡ್ ಹಾಗೂ ನರ್ಸಿಂಗ್ ಕೋರ್ಸ್ ಆರಂಭಿಸಿದ್ದರು. ಪ್ರಸ್ತುತ ಈ ಕೋರ್ಸ್ ಗಳು ನಿಂತಿವೆ. ಪ್ರಸ್ತುತ ಕೆ.ಜಿ., ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಮತ್ತು ಪದವಿ ಮಟ್ಟದ ಶಿಕ್ಷಣಗಳನ್ನು ನೀಡುತ್ತಿದ್ದಾರೆ. ಸುಮಾರು 850 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸುಮಾರು 65 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. 220 ಹುಡುಗರು ಮತ್ತು 180 ಹುಡುಗಿಯರು, ಒಟ್ಟು 400 ಮಕ್ಕಳಿಗೆ ಆಗುವಷ್ಟು ವಸತಿ ನಿಲಯದ ವ್ಯವಸ್ಥೆ ಇದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ತಿರುವೈಲು ಗುತ್ತುವಿನ 'ದೂಜ' ಹೆಸರಿನ ಕಂಬಳ ಕೋಣ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹಲವಾರು ಬಹುಮಾನಗಳನ್ನು…

12 hours ago

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…

12 hours ago

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…

1 day ago

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…

4 days ago

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…

4 days ago

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…

4 days ago