ಮುಲ್ಕಿ: ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತಃ ರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತಃ ರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು ವಿದ್ಯಾರ್ಥಿಗಳಿಗೆ ಆಗಲಿ, ಶಿಕ್ಷಣ ಮತ್ತು ನೃತ್ಯಕಲೆಯಿಂದ ಇದು ಸಾಧ್ಯವಾಗಲಿದೆ, ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು ಎಂದು ಕಿನ್ನಿಗೋಳಿಯ ಶಿವಪ್ರಣಾಮ್ ನೃತ್ಯ ಸಂಸ್ಥೆಯ ನಿರ್ದೇಶಕರಾದ ಅನ್ನಪೂರ್ಣ ರಿತೇಶ್ ಶುಭ ಹಾರೈಸಿದರು.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಈ ಶೈಕ್ಷಣಿಕ ವರ್ಷದ ಉಚಿತ ನೃತ್ಯ ತರಗತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೃತ್ಯಕಲೆ ನಮ್ಮ ಹೃದಯದ ಭಾಷೆ. ಈ ಕಲೆಯಲ್ಲಿ ಎಲ್ಲಾ ಶಿಕ್ಷಣವೂ ಇದೆ. ಹಾಗಾಗಿ ಶಿಕ್ಷಣದಲ್ಲಿ ನೃತ್ಯಕಲೆ ಇರಲೇಬೇಕು. ಇದರಿಂದ ಹೃದಯವಂತ ಸುಸಂಸ್ಕೃತ ವ್ಯಕ್ತಿಗಳ ನಿರ್ಮಾಣ ಸಾಧ್ಯವಾಗಿ ಮಾನವರಾಗಿ ಈ ಸಮಾಜದಲ್ಲಿ ಬದುಕಬಹುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಭುವನಾಭಿರಾಮ ಉಡುಪ, ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು, ನೃತ್ಯ ತರಬೇತುದಾರರಾದ ಸುಧಾಕರ್ ಸುರತ್ಕಲ್ ಉಪಸ್ಥಿತರಿದ್ದರು.
ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಸ್ವಾಗತಿಸಿದರು ಸಹ ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ದೀಪಿಕಾ ವಂದಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…