ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ.
ತಡರಾತ್ರಿ 08:05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ ತೆರಳಿತ್ತು. ಈ ವೇಳೆ ದೊಡ್ಡ ಸದ್ದು ಆವರಿಸಿತ್ತು. ಅದನ್ನು ಸ್ಥಳೀಯರು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಆವರಿಸಿತ್ತು. ಪರಿಣಾಮ ಸ್ಥಳೀಯ ಕೆಲವು ಮನೆಗಳಲ್ಲಿಯೂ ಕಂಪನವುoಟಾಗಿತ್ತು. ತಕ್ಷಣವೇ ರೈಲು ಅಪಘಾತವೆಂದು ಭಾವಿಸಿ ಹಳಿಯತ್ತ ದೌಡಾಯಿಸಿದಾಗ ಹಳಿ ಮೇಲಿರಿಸಲಾದ ಜಲ್ಲಿಕಲ್ಲುಗಳು ತುಂಡಾಗಿರುವುದು ಅಲ್ಪಸ್ವಲ್ಪ ಕಂಡುಬoದಿದೆ. 40 ವರ್ಷಗಳಿಂದ ತೊಕ್ಕೊಟ್ಟು ಪರಿಸರದಲ್ಲಿ ನೆಲೆಸಿದ್ದೇವೆ. ಆದರೆ ರೈಲು ದಾಟುವಾಗ ಕಂಪನದ ಅನುಭವ ಇದೇ ಮೊದಲ ಬಾರಿಗೆ ಆಗಿದೆ ಅನ್ನುವ ಅಭಿಪ್ರಾಯವನ್ನು ಸ್ಥಳೀಯ ಮಹಿಳೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಓವರ್ ಬ್ರಿಡ್ಜ್ ಕೆಳಗಡೆ ನಿತ್ಯ ಅಪರಿಚಿತರು ಬಂದು ಕುಳಿತು ಪಾನಮತ್ತರಾಗಿ ತೆರಳುತ್ತಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳೇ ಇವೆ. ಇದೀಗ ಸಂಭಾವ್ಯ ಅನಾಹುತ ತಪ್ಪಿದೆ. ಮುಂದೊoದು ದಿನ ಅಪಾಯ ನಡೆಯುವ ಮುನ್ನ ಎಚ್ಚೆತ್ತು, ಸಂಬoಧಪಟ್ಟ ಇಲಾಖೆ ಸಿಸಿಟಿವಿ ಅಳವಡಿಸಬೇಕು ಅನ್ನುವ ಆಗ್ರಹ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…