ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ರಾಮಕೃಷ್ಣ, ಹರೀಶ್, ಸುತೇಶ್, ಸಂಜೀವ,ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ನರೇಂದ್ರ ಭಟ್, ಕಂದಾಯ ನಿರೀಕ್ಷಕ ಜನಾರ್ಧನ,ವಿಜಯ್, ಪ್ರಶಾಂತ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.
ಮತದಾನ ಎಲ್ಲಿ, ಮತದಾರರೆಷ್ಟು?
ಬಂಟ್ವಾಳ ತಾಲೂಕಿನಲ್ಲಿ ಒಟ್ಟು 795 ಮತದಾರರಿದ್ದು,ಅದರಲ್ಲಿ 381 ಗಂಡು,414 ಹೆಣ್ಣು ಮತದಾರರಿದ್ದಾರೆ. 51 ಗ್ರಾಮಪಂಚಾಯತ್ ಗಳಲ್ಲಿ , ಒಂದು ಪುರಸಭೆ ( ಬಂಟ್ವಾಳ) ಒಂದು ಪಟ್ಟಣಪಂಚಾಯತ್ (ವಿಟ್ಲ) ಹೀಗೆ ಒಟ್ಟು 53 ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡು ಸಂಜೆ 4 ರ ತನಕ ಮತದಾನ ನಡೆಯಲಿದೆ.
53 ಕಡೆಗಳಲ್ಲಿ ನಡೆಯುವ ಮತದಾನ ಕೇಂದ್ರಗಳಿಗೆ ಒಟ್ಟು 6 ಸೆಕ್ಟರ್ ಅಧಿಕಾರಿಗಳನ್ನು 53 ಪಿ.ಆರ್.ಒ, 53 ಎಪಿಆರ್ ಒ, 53 ಪಿ.ಒ ಅಧಿಕಾರಿಗಳನ್ನು ಹಾಗೂ 53 ಡಿ.ಗ್ರೂಪ್ ನೌಕರರು ಸೇರಿದಂತೆ ಒಟ್ಟು 216 ಸಿಬ್ಬಂದಿಗಳನ್ನು ಮತ್ತು 5 ಮೈಕ್ರೋ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ನಾಳೆ ಸಂಜೆ ಇದೇ ಶಾಲೆಯಲ್ಲಿ 4.30 ರಿಂದ ಡಿ.ಮಸ್ಟರಿಂಗ್ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…