ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ರಾಮಕೃಷ್ಣ, ಹರೀಶ್, ಸುತೇಶ್, ಸಂಜೀವ,ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ನರೇಂದ್ರ ಭಟ್, ಕಂದಾಯ ನಿರೀಕ್ಷಕ ಜನಾರ್ಧನ,ವಿಜಯ್, ಪ್ರಶಾಂತ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.
ಮತದಾನ ಎಲ್ಲಿ, ಮತದಾರರೆಷ್ಟು?
ಬಂಟ್ವಾಳ ತಾಲೂಕಿನಲ್ಲಿ ಒಟ್ಟು 795 ಮತದಾರರಿದ್ದು,ಅದರಲ್ಲಿ 381 ಗಂಡು,414 ಹೆಣ್ಣು ಮತದಾರರಿದ್ದಾರೆ. 51 ಗ್ರಾಮಪಂಚಾಯತ್ ಗಳಲ್ಲಿ , ಒಂದು ಪುರಸಭೆ ( ಬಂಟ್ವಾಳ) ಒಂದು ಪಟ್ಟಣಪಂಚಾಯತ್ (ವಿಟ್ಲ) ಹೀಗೆ ಒಟ್ಟು 53 ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡು ಸಂಜೆ 4 ರ ತನಕ ಮತದಾನ ನಡೆಯಲಿದೆ.
53 ಕಡೆಗಳಲ್ಲಿ ನಡೆಯುವ ಮತದಾನ ಕೇಂದ್ರಗಳಿಗೆ ಒಟ್ಟು 6 ಸೆಕ್ಟರ್ ಅಧಿಕಾರಿಗಳನ್ನು 53 ಪಿ.ಆರ್.ಒ, 53 ಎಪಿಆರ್ ಒ, 53 ಪಿ.ಒ ಅಧಿಕಾರಿಗಳನ್ನು ಹಾಗೂ 53 ಡಿ.ಗ್ರೂಪ್ ನೌಕರರು ಸೇರಿದಂತೆ ಒಟ್ಟು 216 ಸಿಬ್ಬಂದಿಗಳನ್ನು ಮತ್ತು 5 ಮೈಕ್ರೋ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ನಾಳೆ ಸಂಜೆ ಇದೇ ಶಾಲೆಯಲ್ಲಿ 4.30 ರಿಂದ ಡಿ.ಮಸ್ಟರಿಂಗ್ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…