ಮುಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ನಿವಾಸಿ ಕಾಂತು ಲಕ್ಕಣ ಯಾನೆ ಯಾದವ ಬಂಗೇರ(73) ರವರು ಶನಿವಾರ ಸಂಜೆ ನಿಧನರಾದರು. ಅವರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರು ಮುಲ್ಕಿ ಸೀಮೆಯ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಂತಿಮ ಕ್ರಿಯೆಗಳು ಭಾನುವಾರ ಸಸಿಹಿತ್ಲು ವಿನಲ್ಲಿ ನಡೆಯಲಿದೆ.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ, ಕೆಪಿಸಿಸಿ ಕೊ-ಆರ್ಡಿನೇಟರ್ ವಸಂತ್ ಬೆರ್ನಾಡ್ , ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಸಸಿಹಿತ್ಲು, ಚಂದ್ರಕುಮಾರ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಮುಲ್ಕಿ ವಿಜಯ ರೈತರ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಸಾರಂತಾಯ ಗೆರೋಡಿಯ ಆಡಳಿತ ಮಂಡಳಿಯ ಸದಸ್ಯರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…