ಚಲನಚಿತ್ರ

ಕಿಚ್ಚನ ನಿಲುವಿಗೆ ಚೈತ್ರ ಕುಂದಾಪುರ ಅಪಸ್ವರ?! – BIGGBOSS

ಕನ್ನಡ ಬಿಗ್ ಬಾಸ್ ಕಳೆದ ಸೀಸನ್​ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ಈಗ ಸುದೀಪ್ ಅವರು ಜಗದೀಶ್ ಪರ ನಿಂತಿದ್ದನ್ನು ಚೈತ್ರಾ ಕುಂದಾಪುರ ಅವರು ಖಂಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದಕ್ಕೆ ಕಾರಣ ಆಗಿದ್ದು ಆ ವಾರ ಪೂರ್ತಿ ನಡೆದ ಮಾತಿನ ಚಕಮಕಿ ಹಾಗೂ ಕೈ ಕೈ ಮಿಲಾಯಿಸಿಕೊಂಡು ಮಾಡಿದ ಜಗಳ. ಎಲ್ಲರೂ ಜಗದೀಶ್​ನ ವಿರುದ್ಧ ಮಾತನಾಡಿದ್ದರಿಂದಲೇ ಅವರು ಪ್ರವೋಕ್ ಆದರು ಎಂಬ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗಿದೆ. ಇದೇ ವಿಚಾರವನ್ನು ಸುದೀಪ್ ಅವರು ಮಾತನಾಡಿದ್ದಾರೆ. ಇದಕ್ಕೆ ಚೈತ್ರಾ ಕುಂದಾಪುರ ಖಂಡನೆ ವ್ಯಕ್ತಪಡಿಸಿದ್ದಾರೆ.

ಸುದೀಪ್ ಅವರು ವೀಕೆಂಡ್​ನಲ್ಲಿ ಜಗದೀಶ್ ಅವರ ಪರವಾಗಿ ಮಾತನಾಡಿದರು. ಜಗದೀಶ್ ಹೇಳಿದ್ದು ಸರಿ ಅಲ್ಲ ಎಂದು ಹೇಳಿದ ಸುದೀಪ್​, ಎಲ್ಲರೂ ಅವರನ್ನು ತಡೆಯಬಹುದಿತ್ತು ಎನ್ನುವ ಅಭಿಪ್ರಾಯ ಹೊರಹಾಕಿದ್ದರು. ಈ ಬಗ್ಗೆ ಎಲ್ಲರಿಗೂ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನು ಮನೆ ಮಂದಿ ಖಂಡಿಸಿದ್ದಾರೆ.

ಈ ಬಗ್ಗೆ ಚೈತ್ರಾ ಮಾತನಾಡಿದ್ದಾರೆ. ‘ನೀನು ನನಗೆ ಕೆಸರು ಎರಚಿದರೆ ನಾನು ಕೂಡ ಕೆಸರನ್ನೇ ಎರಚೋದು. ಆ ವ್ಯಕ್ತಿಗೆ ನಾನು ಗುಲಾಬಿ ಎಸೆಯೋಕಾಗಲ್ಲ. ಆ ವ್ಯಕ್ತಿ ಬಗ್ಗೆ ನನಗೇಕೆ ಅಷ್ಟು ಕ್ಲ್ಯಾರಿಟಿ ಕೊಡ್ತಾರೆ? ಸುದೀಪ್ ಸ್ಪರ್ಧಿಗಳಿಗೆ ಬೈದರು ಅನ್ನೋದನ್ನು ಮಾತ್ರ ಜನರು ನೆನಪಿಟ್ಟುಕೊಳ್ಳುತ್ತಾರೆ. ಮಧ್ಯ ಮಧ್ಯದಲ್ಲಿ ಸೇರಿಸಿದ ಲೈನ್​ನ ಜನರು ನೆನಪಿಟ್ಟುಕೊಳ್ಳಲ್ಲ’ ಎಂದಿದ್ದಾರೆ.

‘ಕೈ ಮುಗಿದು ಪೂಜೆ ಮಾಡುವ ಕಲ್ಲಿಗೂ, ಎಲ್ಲೋ ಬಿದ್ದ ಕಲ್ಲಿಗೂ ವ್ಯತ್ಯಾಸ ಇರುತ್ತದೆ. ರೋಡ್​ನಲ್ಲಿರೋ ಕಲ್ಲಿಗೆ ಉಗಿದೆ ಎಂದ ಮಾತ್ರಕ್ಕೆ ನಾನು ತಪ್ಪಿತಸ್ಥೆ ಆಗಲ್ಲ. ನನ್ನ ಮಾತನ್ನು ಕಂಪ್ಲೀಟ್ ಮಾಡೋಕೆ ಬಿಡಬೇಕು. ಇಡೀ ಮನೆಯನ್ನು ವಿಲನ್ ಮಾಡಿದ್ದಾರೆ. ಅವರು ವಿಚಾರದಲ್ಲಿ ನೀವು ಮಾಡಿದ್ದು ತಪ್ಪು ಅಂದಿದ್ದಾರೆ. ಅದು ಸರಿ ಅಲ್ಲ’ ಎಂದಿದ್ದಾರೆ ಚೈತ್ರಾ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

24 mins ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…

1 week ago

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…

1 week ago