ಮಂಗಳೂರು : ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು”ಮಾದಕದ್ರವ್ಯ ವ್ಯಸನ ಮತ್ತು ಪರಿಹಾರೋಪಾಯಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವೈದ್ಯರ ಸಲಹೆಯಂತೆ ಪಡೆಯುವ ಔಷಧಗಳು ಅಧಿಕೃತ. ವೈದ್ಯರ ಸಲಹೆ ಇಲ್ಲದೆ ಪಡೆಯುವ ಔಷಧಗಳು ಅಕ್ರಮ ಹಾಗೂ ಹಾನಿಕಾರಕ ಪರಿಣಾಮಗಳನ್ನು ಬೀರುತ್ತವೆ. ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು. ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಭರವಸೆಯನ್ನು ಹೊಂದಿ ಉತ್ತಮ ಶಿಕ್ಷಣವನ್ನು ನೀಡಲು ಮುಂದಾಗುವರು. ಅವರ ನಿರೀಕ್ಷೆಯಂತೆ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಅಳವಡಿಸಿ ಮುನ್ನಡೆಯುವಂತೆ ಅವರು ಕರೆಯಿತ್ತರು.
ಇನ್ನೋರ್ವ ಅತಿಥಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಸಹಾಯಕ ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಅವರು “ಆಧುನಿಕ ಸಮಾಜದಲ್ಲಿ ಸಮೂಹ ಮಾಧ್ಯಮಗಳ ಬಳಕೆ” ಬಗ್ಗೆ ಮಾತನಾಡಿ ಮಾಧ್ಯಮಗಳು ಬೆಳೆದುಬಂದ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ನೀಡಿದರು.
ನವೀನ ಮಾಧ್ಯಮದ ಕುರಿತು ಮಾತಾಡಿದ ಅವರು ಶಿಕ್ಷಣ, ಮಾಹಿತಿ ಮತ್ತು ಮನರಂಜನೆಗಾಗಿ ಮಾಧ್ಯಮಗಳು ಬಳಕೆಯಾಗುತ್ತವೆ. ಇದರಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸಾಧ್ಯವಾಗುತ್ತದೆ. ಆದುದರಿಂದ ಮಾಹಿತಿಗಳನ್ನು ಹಂಚಿಕೊಳ್ಳುವಾಗ ಅತ್ಯಂತ ಎಚ್ಚರಿಕೆ ಅಗತ್ಯ ಎಂದು ತಿಳಿಸಿದರು.ಅಮೃತಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಗೌರವ ಸಲಹೆಗಾರ ಡಾ. ಜೀವರಾಜ್ ಸೊರಕೆ ಅಮ್ಮ ಮತ್ತು ಆಶ್ರಮದ ಪರಿಚಯ ನೀಡಿದರು. ಕೇಂದ್ರದ ಅಧ್ಯಕ್ಷ ಡಾ.ವಸಂತಕುಮಾರ ಪೆರ್ಲ ಅವರು 2018 ರಿಂದ ಅತ್ಯುತ್ತಮ ಕಾರ್ಯಕ್ರಮಗಳೊಂದಿಗೆ ಯುವ ಸಮುದಾಯಕ್ಕೆ ಸ್ಪೂರ್ತಿ ತುಂಬುವ ಕಾರ್ಯ ಯಶಸ್ವಿಯಾಗಿ ಈ ಕೇಂದ್ರದಿಂದ ನಡೆಯುತ್ತಿದೆ ಎಂದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅತಿಥಿಗಳ ಪರಿಚಯವಿತ್ತರು. ಅತಿಥಿಗಳು ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.
ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಸ್ವಾಗತಿಸಿದರು, ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ವಂದಿಸಿದರು. ಪ್ರವೀಣ್ ಚಂದ್ರ ಶರ್ಮ ವಂದಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…