ಜನ ಮನದ ನಾಡಿ ಮಿಡಿತ

Advertisement

ಕುಡುಕ ಗಂಡನ ಕಿರುಕುಳಕ್ಕೆ ಹೆಂಡತಿ ಮಕ್ಕಳು ಆತ್ಮಹತ್ಯೆ, ಪುತ್ರಿ ಸಾವು!

ಚಾಮರಾಜನಗರ: ಕುಡಿತದ ಚಟಕ್ಕೆ ಬಿದ್ದು ನಲುಗಿಹೋದ ಕುಟುಂಬಗಳು ಅದೆಷ್ಟೋ ಇದೆ. ಇಂತದ್ದೇ ಒಂದು ಮನಕಲುಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ದಿನನಿತ್ಯ ಮಧ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಹೆಂಡತಿ ತನ್ನಿಬ್ಬರು ಮಕ್ಕಳಿಗೂ ವಿಷ ಕೊಡಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ವರ್ಷದ ಮಗಳು ಸಿಂಧು ಸಾವನಪ್ಪಿದರೆ ತಾಯಿ ಶೀಲಾ (25) ಮತ್ತು ಪುತ್ರ ಯಶವಂತ್ (12) ಸ್ಥಿತಿ ಗಂಭೀರವಾಗಿದೆ. ಪತಿ ಮಾದೇಶ್ ವಿಪರೀತ ಕುಡಿಯುತ್ತಿದ್ದ ಪ್ರತಿನಿತ್ಯ ಮಧ್ಯ ಸೇವಿಸಿ ಬಂದು ಪತ್ನಿ ಶೀಲಾಗೆ ಕಿರುಕುಳ ನೀಡುತ್ತಿದ್ದರಿಂದ ನಿರಂತರವಾಗಿ ಗಂಡ ಹೆಂಡತಿ ಮಧ್ಯ ಜಗಳ ಆಗಿತ್ತು. ಇದರಿಂದ ಮನನೊಂದು ಶೀಲಾ 12ರಂದು ಆರು ಗಂಟೆ ಸಮಯದಲ್ಲಿ ತನ್ನಿಬ್ಬರು ಮಕ್ಕಳಿಗೆ ವಿಷ ಕೊಡಿಸಿ ತಾನು ಕುಡಿದಿದ್ದಾಳೆ. ಪುತ್ರಿ ಮರಣ ಹೊಂದಿದ್ದಾಳೆ ಹಾಗೂ ಪುತ್ರ, ಪತ್ನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರು ತಂದೆ ಮಾದೇಶ್ ಆಸ್ಪತ್ರೆ ಬಂದಿಲ್ಲ. ಹೀಗಾಗಿ ಮಾದೇಶ್ವರ ಸಂಬಂಧಿಕರು ಅಕ್ರೋಶ ಹೊರಹಾಕಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!